
ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತರ ಕುಟುಂಬಗಳ ಜತೆ ನಾವಿದ್ದೇವೆ. ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಎಂದು ಮೋದಿ ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ನೀಡಲಾಗುವುದು ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಕೊಡಲಾಗವುದು ಎಂದು ಮೋದಿ ಹೇಳಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬಸ್ಸಿನ ಬಾಗಿಲು ಮುಚ್ಚಿಹೋಗಿತ್ತು.ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು. ಬದುಕುಳಿದವರಲ್ಲಿ ಹೆಚ್ಚಿನವರು 25 ರಿಂದ 35 ವರ್ಷ ವಯಸ್ಸಿನವರು ಎಂದು ಪೊಲೀಸರು ತಿಳಿಸಿದ್ದಾರೆ










