
ಮಿಜಾರಿನ ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮಗ್ರ ಸ್ವಾಸ್ಥ್ಯಧಾಮ ಪ್ರಾಣ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಗುರುವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
ಗಾಯಕಿ ಅಖಿಲಾ ಪಜಿಮಣ್ಣು ಮಾತನಾಡಿ, ನಮ್ಮ ಬದುಕು ಪ್ರಕೃತಿಯೊಂದಿಗೆ ಸಾಗಬೇಕು. ಪ್ರಕೃತಿಯೊಡನೆ ಹೆಜ್ಜೆ ಹಾಕಿದಾಗಲೇ ನೆಮ್ಮದಿಯ ಜೀವನ ಸಾಧ್ಯ ಎಂದು ಹೇಳಿದರು.
‘ಪ್ರಾಣ’ ಪ್ರಕೃತಿ ಚಿಕಿತ್ಸಾ ಕೇಂದ್ರದ ನಿರ್ದೇಶಕಿ ಡಾ.ಗ್ರೀಷ್ಮಾ ವಿವೇಕ್ ಆಳ್ವ ಮಾತನಾಡಿ, ಪರಿಪೂರ್ಣ ಪ್ರಾಕೃತಿಕ ಉತ್ಪನ್ನಗಳ ಬಳಕೆಯಿಂದ ಇಂದ್ರಿಯಗಳಿಗೆ ಸಂತೋಷ ನೀಡುವ ಮತ್ತು ನೈಜ ಕಾಂತಿಯನ್ನು ವೃದ್ಧಿಸುವ ಅವಕಾಶ ಇಲ್ಲಿದೆ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿ, ಔಷಧವಿಲ್ಲದೆ ರೋಗವನ್ನು ಗುಣಪಡಿಸುವ ಪ್ರಕೃತಿ ಚಿಕಿತ್ಸೆ ಪದ್ಧತಿ ಈಗ ವಿಶ್ವಮಟ್ಟದಲ್ಲಿ ಮಾನ್ಯತೆ ಪಡೆದಿದೆ ಎಂದು ಹೇಳಿದರು.
ಜಯಶ್ರೀ ಅಮರನಾಥ್ ಶೆಟ್ಟಿ, ಉದ್ಯಮಿ ಕೆ.ಶ್ರೀಪತಿ ಭಟ್, ಕುಲದೀಪ್ ಎಂ., ವಿವೇಕ ಆಳ್ವ, ಡಾ.ಹನಾ ಭಾಗವಹಿಸಿದ್ದರು. ಡಾ.ಸುಧಾರಾಣಿ ಕಾರ್ಯಕ್ರಮ ನಿರೂಪಿಸಿದರು.











