
ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರು. ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಸ್ಥಳೀಯರು ದಿನವಿಡೀ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದರು.
ದುಬಾರೆ ಮತ್ತು ದೊಡ್ಡಹರವೆ ಆನೆ ಶಿಬಿರಗಳಿಂದ ಐದು ಕುಮ್ಕಿ ಆನೆಗಳನ್ನು ಕರೆಸಲಾಗಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿತ್ತು. ರಾತ್ರಿ ವೇಳೆಗೆ ಸೆರೆ ಸಿಕ್ಕ ಆನೆಯನ್ನು ದೊಡ್ಡಹರವೆ ಆನೆ ಕ್ಯಾಂಪ್ಗೆ ಸ್ಥಳಾಂತರ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.











