Saturday, March 7, 2026
ಕ್ರೀಡೆಮುಂಬೈರಾಜ್ಯರಾಷ್ಟ್ರೀಯಸುದ್ದಿ

ವಿಶ್ವಕಪ್ ಗೆದ್ದ ರಾಜ್ಯದ ಆಟಗಾರ್ತಿಯರಿಗೆ ಬಹುಮಾನ ಘೋಷಿಸಿದ ಮಹಾರಾಷ್ಟ್ರ ಸರ್ಕಾರ – ಕಹಳೆ ನ್ಯೂಸ್

ಮುಂಬೈ: ಮಹಿಳಾ ವಿಶ್ವಕಪ್‌ ವಿಜೇತ ಭಾರತ ತಂಡಕ್ಕೆ ಶುಭಾಶಯಗಳನ್ನು ತಿಳಿಸಿರುವ ಮಹಾರಾಷ್ಟ್ರ ಸರ್ಕಾರ, ರಾಜ್ಯದ ಆಟಗಾರ್ತಿಯರಿಗೆ ನಗದು ಬಹುಮಾನ ನೀಡುವುದಾಗಿ ಮಂಗಳವಾರ ತಿಳಿಸಿದೆ.

ಮೊದಲ ಬಾರಿ ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ತಂಡದಲ್ಲಿದ್ದ ಮಹಾರಾಷ್ಟ್ರ ಮೂಲದ ಆಟಗಾರ್ತಿಯರಾದ ಸ್ಮೃತಿ ಮಂದಾನ, ಜೆಮಿಮಾ ರಾಡ್ರಿಗಸ್ ಹಾಗೂ ರಾಧಾ ಯಾದವ್‌ ಅವರಿಗೆ ನಗದು ಬಹುಮಾನ ನೀಡಿ, ಗೌರವಿಸಲಿದ್ದೇವೆ ಎಂದು ಮುಖ್ಯಮಂತ್ರಿ ಕಚೇರಿಯು ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ, ಬಹುಮಾನದ ಮೊತ್ತವನ್ನು ಮುಖ್ಯಮಂತ್ರಿ ಕಚೇರಿಯು ತಿಳಿಸಿಲ್ಲ.

ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಅಜಿತ್‌ ಪವಾರ್‌ ಅವರು ಕೂಡ ಭಾಗವಹಿಸಿದ್ದರು.

ಭಾನುವಾರ ರಾತ್ರಿ ನವಿ ಮುಂಬೈನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 52 ರನ್‌ಗಳ ಅಂತರದಲ್ಲಿ ಸೋಲಿಸುವ ಮೂಲಕ ವಿಶ್ವಕಪ್‌ ಗೆದ್ದುಕೊಂಡಿತ್ತು.