
ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹರುವನಹಳ್ಳಿ ಗ್ರಾಮದ ಸಮೀಪ ನಡೆದಿದೆ.
ಕರಿರಾಜು ಎಂಬುವರ ಜಮೀನಿನ ಹಾಕಿದ್ದ ಭತ್ತದ ಗದ್ದೆಯಲ್ಲಿ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ಬೇಲಿಗೆ ತಗುಲಿ 25 ವರ್ಷದ ಕಾಡಾನೆ ಸಾವನ್ನಪ್ಪಿದೆ.

ಸ್ಥಳಕ್ಕೆ ಲಕ್ಕವಳ್ಳಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ. ಕರಿರಾಜು, ಅಯ್ಯಪ್ಪ, ಮುರುಗಾ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.









