Friday, April 24, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಗಮನ ಮನಸೆಳೆಯುತ್ತಿದೆ ವೈವಿಧ್ಯಮಯ ಮತ್ಸ್ಯಮೇಳ – ಕಹಳೆ ನ್ಯೂಸ್

ಬೆಂಗಳೂರು : ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ-2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.

ಈ ಕುರಿತು ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ನಿನ್ನೆಯಿಂದ ಆಯೋಜಿಸಿರುವ ಮೂರು ದಿನಗಳ ಈ ಕಾರ್ಯಕ್ರಮವು ಹಲವು ವಿಶೇಷತೆಗಳಿಂದ ಕೂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೌಲ್ಯವರ್ಧಿತ ಮೀನಿನ ಉತ್ಪನ್ನಗಳ ತಯಾರಿ, ಮಾರಾಟ, ರಫ್ತು ಮಾಡುವ ಉದ್ದೇಶದಿಂದ ಜನರಿಗೆ ಮೀನಿನ ವಿಶೇಷ ತಿಂಡಿಗಳನ್ನು ಈ ಸಲದ ಮತ್ಸ್ಯಮೇಳದಲ್ಲಿ ಪರಿಚಯಿಸಲಾಗಿದೆ.ರಾಜ್ಯ ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದ ಮಳಿಗೆ ಹತ್ತು ಹಲವು ಮಾಹಿತಿಗಳನ್ನು ತಿಳಿಸಿಕೊಡುತ್ತಿದೆ. ಇಲ್ಲಿ ಯೋಜನೆಗಳು ಅನುಷ್ಠಾನಗೊಂಡಿರುವ ಬಗ್ಗೆಯೂ ವಿಸ್ತೃತ ಮಾಹಿತಿ ಸಿಗಲಿದ್ದು, ಜೊತೆಗೆ ಗಮನ ಸೆಳೆಯುವಂತಹ ಮೀನುಗಾರಿಕೆಯಲ್ಲಿ ಬಳಸುವ ಸಾಧನಗಳನ್ನು ಮಳಿಗೆಯಲ್ಲಿ ವೀಕ್ಷಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.