ಹುಬ್ಬಳ್ಳಿಯಲ್ಲಿ ವಧು -ವರ ಇಲ್ಲದೇ ನಡೀತು ಆರತಕ್ಷತೆ ಸಮಾರಂಭ: ವಿಮಾನ ಟೇಕಾಫ್ ಆಗದ ಕಾರಣ ಆನ್ ಲೈನ್ ನಲ್ಲೇ ಭಾಗಿಯಾದ ಮದು ಮಕ್ಕಳು-ಕಹಳೆ ನ್ಯೂಸ್

ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ನವೆಂಬರ್ 23ರಂದು ಭುವನೇಶ್ವರದಲ್ಲಿ ಟೆಕ್ಕಿಗಳ ಮದುವೆಯಾಗಿದೆ. ಹುಬ್ಬಳ್ಳಿಯ ಮೇಧಾ ಮತ್ತು ಭುವನೇಶ್ವರದ ಸಂಗಮದಾಸ್ ಅವರ ಮದುವೆ ನೆರವೇರಿದ್ದು, ಬುಧವಾರ ಹುಬ್ಬಳ್ಳಿಯಲ್ಲಿ ಆರತಕ್ಷತೆ ಆಯೋಜಿಸಲಾಗಿತ್ತು. ಬಂದು ಬಾಂಧವರು ಸಮಾರಂಭಕ್ಕೆ ಆಗಮಿಸಿದ್ದರು. ಆದರೆ ವಿಮಾನವಿಲ್ಲದೇ ವಧು-ವರರು ಬಾರದ ಕಾರಣ ಆನ್ಲೈನ್ ಲ್ಲಿಯೇ ಭಾಗವಹಿಸಿದ್ದಾರೆ. ವಧು -ವರರೇ ಇಲ್ಲದೆ ಆರತಕ್ಷತೆ ಸಮಾರಂಭದಲ್ಲಿ ಬಂಧು ಬಾಂಧವರು ಭಾಗಿಯಾಗಿದ್ದಾರೆ.









