ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣ: ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಗೋವರ್ಧನ್ ಅರೆಸ್ಟ್ – ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಎಸ್ ಐಟಿ ಅಧಿಕಾರಿಗಳು ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಅವರನ್ನು ಬಂಧಿಸಿದ್ದಾರೆ.
ಬಳ್ಳಾರಿಯ ರೊದ್ದಂ ಜ್ಯುವೆಲರಿ ಶಾಪ್ ಮಾಲೀಕರಾಗಿರುವ ಗೋವರ್ಧನ್ ಅವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಕೇರಳಕ್ಕೆ ಕರೆಸಿಕೊಂಡಿದ್ದ ಎಸ್ ಐಟಿ ಅಧಿಕಾರಿಗಳು ವಿಚಾರಣೆ ಬಳಿಕ ಗೋವರ್ಧನ್ ಅವರನ್ನು ಬಂಧಿಸಿದ್ದಾರೆ.
ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ನಿಂದ ಚಿನ್ನ ಖರೀದಿಸಿರುವ ಆರೋಪದಡಿ ಗೋವರ್ಧನ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.














