Sunday, March 8, 2026
ರಾಜ್ಯಸುದ್ದಿ

ಚಿತ್ರದುರ್ಗ ಬಸ್ ಅಪಘಾತ | ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ: ಪ್ರಧಾನಿ ಮೋದಿ-ಕಹಳೆ ನ್ಯೂಸ್

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಾಘತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ₹ 2 ಲಕ್ಷ ನೀಡುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ..

ಈ ಬಗ್ಗೆ ಪ್ರಧಾನ ಮಂತ್ರಿ ಕಾರ್ಯಾಲಯದ ‘ಎಕ್ಸ್’ ಪೋಸ್ಟ್‌ ಮಾಹಿತಿ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಮೋದಿ ಹಾರೈಸಿದ್ದಾರೆ.

ಮೃತರ ಕುಟುಂಬಕ್ಕೆ ‍ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹ 2 ಲಕ್ಷ ಹಾಗೂ ಗಾಯಗೊಂಡವರ ಕುಟುಂಬಕ್ಕೆ ₹ 50 ಸಾವಿರ ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಂಟೈನರ್ ಹಾಗೂ ಸ್ಲೀಪರ್ ಬಸ್ ನಡುವೆ ಗುರುವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಹಲವು ಮಂದಿ ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ ಇನ್ನೂ ನಿಖರವಾಗಿಲ್ಲ.

ಸೀಬರ್ಡ್ ಕಂಪನಿಯ ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿತ್ತು. ಬೆಂಗಳೂರು ಕಡೆಗೆ ಹೊರಟಿದ್ದ ಕಂಟೈನರ್ ಡಿವೈಡರ್ ಗೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ.