ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಿಗ್ ರಿಲೀಫ್..!! ನಿನ್ನೆ ಪುತ್ತೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಇಂದು ಹೈಕೋರ್ಟ್ ಮಹತ್ವದ ಆದೇಶ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಆರ್.ಎಸ್. ಎಸ್. ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ, ಪ್ರಕರಣದ ಕುರಿತು ಹೈ ಕೋರ್ಟ್ ಮಹತ್ವದ ಆದೇಶ ಮಾಡಿದೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 10/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂಗಳು 196, 299, 302, 353(2), 3(5) ರಂತೆ ಪ್ರಕರಣ ದಾಖಲಾಗಿತ್ತು.
ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ಡಾ.ಭಟ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ವಿರುದ್ಧ ಯಾವುದೇ ಬಲವಂತದ ಹಾಗೂ ಒತ್ತಡದ ಕ್ರಮ ಬೇಡ ಎಂದು ಆದೇಶ ಮಾಡಿದೆ. ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪರ ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದರು. ಅರ್ಜಿಯ ವಿಚಾರಣೆ ಮುಂದೂಡಲಾಗಿದೆ.














