Wednesday, March 11, 2026
ಸುದ್ದಿ

ಧರ್ಮಸ್ಥಳದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಉಗ್ರಂ ಮಂಜು- ಕಹಳೆ ನ್ಯೂಸ್

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ (ಜ.23) ಕಾಲಿಟ್ಟಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು, ಹಿರಿಯ ಆಶೀರ್ವಾದದೊಂದಿಗೆ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಆಪ್ತರು ಭಾಗಿಯಾಗಿದ್ದರು.

ನಿನ್ನೆ ಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಸರಳವಾಗಿ ನೆರವೇರಿತ್ತು. ಮನೆಯಲ್ಲಿಯೇ ನಡೆದ ಈ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು, ಆಪ್ತರು ಹಾಗೂ ಆತ್ಮೀಯ ಗೆಳೆಯರು ಮಾತ್ರ ಭಾಗವಹಿಸಿದ್ದರು. ಹಳದಿ ಶಾಸ್ತ್ರದ ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು