Friday, March 6, 2026
ಉಡುಪಿಜಿಲ್ಲೆಸುದ್ದಿ

ಉಡುಪಿಯಲ್ಲಿ ಕೇರಳ ಕುಟ್ಟಿಗಳ ಹುಚ್ಚಾಟ – ಮದ್ಯ ಸೇವಿಸಿ ಮನಬಂದಂತೆ ವರ್ತನೆ -ಕಹಳೆ ನ್ಯೂಸ್

ಉಡುಪಿ : ನಡುರಸ್ತೆಯಲ್ಲೇ ವಿದ್ಯಾರ್ಥಿಗಳ ಗುಂಪೊಂದು ಕುಡಿದು ನಡು ರಸ್ತೆಯಲ್ಲೇ, ಪಟಾಕಿ ಸಿಡಿಸಿ ಅಶಾಂತಿ ಉಂಟುಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.

ಕೇರಳದಿಂದ ಉಡುಪಿ ಕಡೆ ಪ್ರವಾಸಕ್ಕಾಗಿ ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಬಂದಿದ್ದು, ಟೋಲ್ ಗೇಟ್ ಬಳಿ ಬಸ್‌ಗಳನ್ನು ನಿಲ್ಲಿಸಿ ಮದ್ಯಸೇವನೆ ಮಾಡಿದ ವಿದ್ಯಾರ್ಥಿಗಳು ಸಾರ್ವಜನಿಕ ರಸ್ತೆಯಲ್ಲೇ ಕುಣಿದು, ಪಟಾಕಿ ಸಿಡಿಸಿ ಹುಚ್ಚಾಟ ನಡೆಸಿದ್ದರಿಂದ ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿದೆ. ನಡುರಸ್ತೆಯಲ್ಲಿನ ಈ ಅಸಭ್ಯ ವರ್ತನೆಯ ದೃಶ್ಯಗಳು ವಿಡಿಯೋ ರೂಪದಲ್ಲಿ ದಾಖಲಾಗಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ವಿಡಿಯೋವನ್ನು ಆಧರಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದು, ಸಂಚಾರ ನಿಯಮ ಉಲ್ಲಂಘನೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಪ್ರಕರಣವಾಗಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು