Recent Posts

Saturday, September 12, 2026
ಜಿಲ್ಲೆರಾಜ್ಯಸುದ್ದಿ

ಸನ್ಯಾಸತ್ವ ಸ್ವೀಕರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ -ಕಹಳೆ ನ್ಯೂಸ್

ದಾವಣಗೆರೆ: ನಗರದ (Davanagere) ಚೌಕಿಪೇಟೆಯ 26 ವರ್ಷದ ಯುವತಿಯೊಬ್ಬರು ಸಂಸಾರ ತೊರೆದು ಸನ್ಯಾಸತ್ವ ಸ್ವೀಕರಿಸಿದ್ದಾರೆ.

ಜಾಹೀರಾತು

ಮುಖೇಶ್ ಕುಮಾರ್ ಹಾಗೂ ಸುನೀತಾ ಅವರ ಪುತ್ರಿ ಆಂಚಲ್ ಕುಮಾರಿ (26) ಜೈನ ಧೀಕ್ಷೆ ಪಡೆದಿದ್ದಾರೆ. ಅವರು ಖಾಸಗಿ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದರು. ಅಲ್ಲದೇ ಕಾಲೇಜಿನಲ್ಲಿ ಟಾಪರ್ ಆಗಿದ್ದರು. ಇಂದು (ಫೆ.6) ಸೂರತ್‌ನಲ್ಲಿ ಅವರು ಸನ್ಯಾಸ ಧೀಕ್ಷೆ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಯುವತಿಯ ಆಯ್ಕೆಯನ್ನು ಕುಟುಂಬಸ್ಥರು ಸಹ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಇತ್ತೀಚಿಗೆ ಆಂಚಲ್ ಕುಮಾರಿಯವರು ಆಧ್ಯಾತ್ಮದ ಕಡೆ ವಾಲಿದ್ದರು. ಸಂಸಾರ ಸುಖಃ ಜೀವನಕ್ಕಿಂತ ಸನ್ಯಾಸತ್ವದ ಜೀವನವೇ ಶ್ರೇಷ್ಠ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ.