Thursday, April 23, 2026
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಎರಡು ಸರ್ಕಾರಿ ಬಸ್‌ ಸೀಜ್‌! -ಕಹಳೆ ನ್ಯೂಸ್

ಚಿಕ್ಕಮಗಳೂರು: ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಸರ್ಕಾರಿ ಬಸ್‌ಗಳನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೀಜ್‌ ಮಾಡಲಾಗಿದೆ.

ಅಪಘಾತದ ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಕೋರ್ಟ್‌ ಆದೇಶದ ಹಿನ್ನೆಲೆ ವಕೀಲರ ತಂಡ ಬಸ್‌ನ್ನು ಸೀಜ್‌ ಮಾಡಿದೆ. ಬಸ್‌ನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ತಂದು ನಿಲ್ಲಿಸುವಂತೆ ವಕೀಲರು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ನಡುರಸ್ತೆಯಲ್ಲಿ ಇಳಿಸಿದ್ದಕ್ಕೆ ಜನ ಆಕ್ರೋಶ ಹೊರಹಾಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವಾಗ ಮಾರ್ಗ ಮಧ್ಯೆ ಬಸ್‌ ಸೀಜ್‌ ಮಾಡಲಾಗಿದೆ.