ಹೋಟೆಲ್ಗಳ ಮೇಲೆ ತಹಶೀಲ್ದಾರ್ ದಾಳಿ : 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ- ಕಹಳೆ ನ್ಯೂಸ್

ದಾವಣಗೆರೆ: ಜಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ.
ನಗರದ ಹಲವು ಹೋಟೆಲ್ ಹಾಗೂ ಟೀ ಅಂಗಡಿಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ಮಾಡಲಾಗುತ್ತಿತ್ತು. ಈ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿಯವರು ದಾಳಿ ನಡೆಸುವಂತೆ ತಹಶೀಲ್ದಾರ್ ಕಲೀಂ ಉಲ್ಲಾ ಅವರಿಗೆ ಸೂಚಿಸಿದ್ದರು. ಡಿಸಿ ಸೂಚನೆ ಮೇರೆಗೆ ದಾಳಿ ನಡೆಸಿದಾಗ ಗೃಹ ಬಳಕೆಯ ಸಿಲಿಂಡರ್ಗಳು ಪತ್ತೆಯಾಗಿವೆ.
ಗೃಹ ಬಳಕೆ ಸಿಲಿಂಡರ್ಗಳನ್ನು ಹೋಟೆಲ್ಗಳಲ್ಲಿ ಬಳಕೆ ಮಾಡುವಂತಿಲ್ಲ. ಆದರೆ ಕಮರ್ಷಿಯಲ್ ಸಿಲಿಂಡರ್ ಅಭಾವದ ಹಿನ್ನಲೆ ಗೃಹ ಬಳಕೆ ಸಿಲಿಂಡರ್ಗಳನ್ನು ಹೋಟೆಲ್ ಮಾಲೀಕರು ಬಳಕೆ ಮಾಡುತ್ತಿದ್ದಾರೆ.















