ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಸರಣಿ ಅಪಘಾತ :ತಪ್ಪಿದ ದುರಂತ -ಕಹಳೆ ನ್ಯೂಸ್

ಲಕ್ನೋ: ಏ.14 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಆಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ವೇಯ ಮೋಹಂದ್ ರೇಂಜ್ನಲ್ಲೀ ಭೀಕರ ಸರಣಿ ಅಪಘಾತ ನಡೆದಿದೆ. ಎಲ್ಪಿಜಿ ಸಿಲಿಂಡರ್ ತುಂಬಿದ ಟ್ರಕ್ ಸೇರಿ ಸುಮಾರು 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಉತ್ತರ ಪ್ರದೇಶದ ಸಹರಾನ್ಪುರದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಠಾತ್ ಬ್ರೇಕ್ ವೈಫಲ್ಯ ಮತ್ತು ಅನಿಯಂತ್ರಿತ ವೇಗದಿಂದಾಗಿ ಭೀಕರ ಅಪಘಾತ ಸಂಭವಿಸಿದೆ. ಎಲ್ಪಿಜಿ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಕಾರುಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಗಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ.
ಏಪ್ರಿಲ್ 14 ರಂದು ಪ್ರಧಾನಿಯವರಿಂದ ಎಕ್ಸ್ಪ್ರೆಸ್ವೇ ಉದ್ಘಾಟನೆಗೆ ಒಂದು ದಿನ ಮುನ್ನ ಈ ಅಪಘಾತ ಸಂಭವಿಸಿದೆ.
ಏ.14 ರಂದು ಉದ್ಘಾಟನೆ ಆಗಬೇಕಿರುವ ಎಕ್ಸ್ಪ್ರೆಸ್ ವೇ
ಉತ್ತರ ಪ್ರದೇಶದ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ವೇ ಏಪ್ರಿಲ್ 14 ರಂದು (ನಾಳೆ) ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಆಗಬೇಕಿದೆ. ಇಂದು ಸಿಎಂ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನ ಪರಿಶೀಲಿಸಲಿದ್ದಾರೆ. ಈ ಹೊತ್ತಿನಲ್ಲೇ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದು, ವಿಐಪಿ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಸಕಲ ಕ್ರಮ ಕೈಗೊಂಡಿದ್ದಾರೆ.









