Thursday, April 23, 2026
ಸುದ್ದಿ

ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್‌ಎಸ್‌ -ಕಹಳೆ ನ್ಯೂಸ್

ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ಒಂದು ವೇಳೆ ಮುಂಗಾರು ತಡವಾದ್ರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರು ಅವಲಂಬಿಸಿರುವ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಭೀತಿಯಿದೆ. 

ಈ ವರ್ಷ ಕೆಆರ್‌ಎಸ್ ಅಣೆಕಟ್ಟೆ ಅವಧಿಗೂ ಮುನ್ನವೇ ಭರ್ತಿಯಾಗುವ ಮೂಲಕ ದಾಖಲೆ ಬರೆದಿತ್ತು. ಇದೀಗ 124.80 ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯದಲ್ಲಿ ನೀರಿನ ಮಟ್ಟ 99 ಅಡಿಗೆ ತಲುಪಿದೆ. ಒಳಹರಿವು 66 ಕ್ಯೂಸೆಕ್ ಇದ್ದು, 4,033 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದರೂ ಕೂಡ ಪ್ರಸ್ತುತ ಬೆಳೆದು ನಿಂತಿರುವ ಬೆಳೆಗಳಿಗೆ ಕಟ್ಟು ಪದ್ದತಿಯಂತೆ ನೀರು ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ ನಿನೋ ಪ್ರಭಾವದಿಂದಾಗಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗುವುದಿಲ್ಲ ಎನ್ನುವ ಹವಾಮಾನ ತಜ್ಞರ ವರದಿ ಆತಂಕಕ್ಕೆ ಕಾರಣವಾಗಿದೆ. ಮುಂಗಾರಿನ ಅವಧಿಯಲ್ಲಿ ರಾಜ್ಯದ ಬಹುತೇಕ ಕಡೆ ಮಳೆ ಕ್ಷೀಣಿಸುವ ಸಾಧ್ಯತೆ ಇದೆ. ಇದು ಆತಂಕ ಮೂಡಿಸಿದೆ. ಕುಡಿಯುವ ಮತ್ತು ಬೆಳೆಗೆ ನೀರೊದಗಿಸಲು ಮಳೆ ಅನಿವಾರ್ಯವಾಗಲಿದೆ.

ಕಳೆದ 10 ವರ್ಷದಲ್ಲಿ ನೀರಿನ ಸಂಗ್ರಹ(ಏ.18ಕ್ಕೆ)
ವರ್ಷ                   ನೀರಿನ ಮಟ್ಟ
2017                    74.32 ಅಡಿ
2018                   73.94 ಅಡಿ
2019                   92.37 ಅಡಿ
2020                 103.39 ಅಡಿ
2021                  97.72 ಅಡಿ
2022                 103.26 ಅಡಿ
2023                 93.46 ಅಡಿ
2024                   83.22 ಅಡಿ
2025                  101.35 ಅಡಿ
2026                  99 ಅಡಿ