Thursday, April 23, 2026
ಬೆಂಗಳೂರುರಾಜ್ಯಸುದ್ದಿ

ಕಸ ಹಾಕಿ ಬರೋದಾಗಿ ಹೇಳಿ ಲವ್ವರ್‌ ಜೊತೆ ಎಸ್ಕೇಪ್ : ಊಟಕ್ಕೆ ನಿದ್ದೆ ಮಾತ್ರೆ ಹಾಕಿ ಪರಾರಿ: ಪತಿ ಆರೋಪ -ಕಹಳೆ ನ್ಯೂಸ್

ಬೆಂಗಳೂರು: ಕಸ ಹಾಕಿ ಬರೋದಾಗಿ ಮನೆಯಿಂದ ಹೊರಗೆ ಬಂದ ಮಹಿಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದಾರೆ. ಇತ್ತ ಗಂಡ ಎರಡು ಮಕ್ಕಳನ್ನು ಬಿಟ್ಟು ತನ್ನ ಪತ್ನಿ ಪರ ಪುರುಷನ ಜೊತೆ ಓಡಿ ಹೋಗಿದ್ದಾಳೆಂದು ದೂರು ದಾಖಲಿಸಿದ್ದಾರೆ.


ಬೆಂಗಳೂರಿನ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ. ನಾಪತ್ತೆಯಾದ ಪ್ರಿಯಾಂಕಾ ಮತ್ತು ಪತಿ ಶರತ್ ಕುಮಾರ್‌ಗೆ ಇಬ್ಬರು ಮಕ್ಕಳಿದ್ದು, ಬಾಗಲಗುಂಟೆಯಲ್ಲಿ ವಾಸವಾಗಿದ್ದರು.

ಈ ಸಂಬಂಧ ಬಾಗಲಗುಂಟೆಯಲ್ಲಿ ಪತಿ ದೂರು ದಾಖಲಿಸಿದ್ದು, ಕಸ ಹಾಕಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಪರಪುರುಷನೊಂದಿಗೆ ಪರಾರಿಯಾಗಿದ್ದಾಳೆ. ನಾನು ಮನೆಯಲ್ಲಿರುವಾಗಲೇ ಪ್ರಿಯಾಂಕಾ ತನ್ನ ಪ್ರಿಯಕರ ಪ್ರಭು ಜೊತೆ ಹೋಗಿದ್ದಾಳೆ. ಅಷ್ಟೇ ಅಲ್ಲದೆ, ಊಟದಲ್ಲಿ ನಿದ್ದೆ ಮಾತ್ರೆ ಹಾಕಿ ಪರಾರಿಯಾಗಿದ್ದಾಳೆ ಎಂಬ ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕೂ ಮುನ್ನ ಪತಿ ಶರತ್ ಪ್ರಿಯಾಂಕಾಗೆ ಹೀಗೆಲ್ಲ ಮಾಡಬೇಡ ಎಂದು ಬುದ್ಧಿವಾದ ಹೇಳಿ ವಾನ್ ಮಾಡಿದ್ದರು. ಆದರೆ ಏ.11ರ ರಾತ್ರಿ 11:57ರ ಸುಮಾರಿಗೆ ಪ್ರಿಯಾಂಕಾ ಮನೆ ಬಿಟ್ಟು ಹೋಗಿದ್ದಾರೆ. ಮಧ್ಯರಾತ್ರೀಲಿ ಕಸ ಎಸೆದು ಬರೋದಾಗಿ ಮನೆಯಿಂದ ಕಸದ ಬಕೆಟ್ ಹಿಡಿದು ಹೊರಟಿದ್ದಾಳೆ. ಮೊದಲೇ ರೆಡಿ ಮಾಡಿ ಇಟ್ಟಿದ್ದ ಬಟ್ಟೆ ಬ್ಯಾಗ್‌ನ್ನು ಮನೆಯಲ್ಲಿನ ಪತಿ, ಮಕ್ಕಳಿಗೆ ಕಾಣದಂತೆ ಕಸದ ಜೊತೆ ಬ್ಯಾಗ್ ಸಮೇತ ಹೊರಗೆ ಬಂದಿದ್ದಾಳೆ. ಒಂದು ಕೈಯಲ್ಲಿ ಕಸದ ಬಕೆಟ್ ಮತ್ತು ಮತ್ತೊಂದು ಕೈಯಲ್ಲಿ ಬ್ಯಾಗ್ ಹಿಡಿದು ಹೊರಟಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.