Thursday, April 23, 2026
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಎರಡು ಲಕ್ಷ ಡಿ.ಡಿ.ವಿತರಣೆ – ಕಹಳೆ ನ್ಯೂಸ್

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ. ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ಎರಡು ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರು ವಿತರಣೆ ಮಾಡಿದರು.
ಈ‌ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ವಿನೋದ್ ಕುಮಾರ್,ಮರಾಟಿ ಸಂಘದ ಅಧ್ಯಕ್ಷರಾದ ಸೀತಾರಾಮ ನಾಯ್ಕ, ಉಪಾಧ್ಯಕ್ಷರಾದ ರಾಘವ ನಾಯ್ಕ, ಸದಸ್ಯರಾದ ಚಿದಾನಂದ ನಾಯ್ಕ , ಉಮೇಶ್ ನಾಯ್ಕ,ರಮೇಶ ನಾಯ್ಕ ಕೊರಿಂಜ,ಕೃಷ್ಣಪ್ಪ ನಾಯ್ಕ, ಕೋಶಾಧಿಕಾರಿ ಪುಷ್ಪಾನಂದ ನಾಯ್ಕ, ಪ್ರದೀಪ್ ನಾಯ್ಕ್,ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷರಾದ ಚೆನ್ನಕೇಶವ ನಾಯ್ಕ ಅರಸರ ಮಜಲು, ಮಾಜಿ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸೇಸಪ್ಪ ರೈ ಕೊರಿಂಜ ಗಣ್ಯರಾದ ಈಶ್ವರ ಭಟ್ ಮಾಯಿಲ್ತೋಡಿ, ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಯಾದ ಅಶೋಕ್ ಬಿ,ಕಣಿಯೂರು ವಲಯದ ಮೇಲ್ವಿಚಾರಕಿ ಕುಮಾರಿ ಶಿಲ್ಪಾ, ಸೇವಾ ಪ್ರತಿನಿಧಿ ಸವಿತಾ ಮತ್ತು ಸೀತಾರಾಮ ಆಳ್ವ ಕೊರಿಂಜ ಹಾಗೂ ಊರ ಪರವೂರ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು