Monday, May 11, 2026
ಜಿಲ್ಲೆರಾಜ್ಯಸುದ್ದಿ

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ -ಕಹಳೆ ನ್ಯೂಸ್

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ. ಪರಿಹಾರ ಘೋಷಿಸಿದೆ.

ಭಾನುವಾರ (ಮೇ 10) ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೇ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೇ ಕಳುಹಿಸಲು ಅಧಿಕಾರಿಗಳ ತೀರ್ಮಾನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಏನಿದು ಘಟನೆ?
ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬೆಂಗಳೂರು ಮೂಲದ ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ಹರ್ಷಿತ್ ಗೌಡನನ್ನು ಚಿರತೆ ಪೋಷಕರ ಕಣ್ಣೆದುರಲ್ಲೇ ಎಳೆದೊಯ್ದು ಕೊಂದು ಹಾಕಿದ ಘೋರ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಬಳಿ ನಡೆದಿತ್ತು. ಭಾನುವಾರ ಬೆಳಿಗ್ಗೆ ಕುಟುಂಬದ 10 ಮಂದಿ ಸದಸ್ಯರೊಂದಿಗೆ ಹರ್ಷಿತ್ ನಾಗಮಲೆ ಹಾದಿಯಲ್ಲಿ ತೆರಳುತ್ತಿದ್ದಾಗ, ಇಂಡಿಗನತ್ತ ಸಮೀಪ ಚಿರತೆ ದಾಳಿ ಮಾಡಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ, ಅರಣ್ಯದೊಳಗೆ ಬಾಲಕನ ಶವ ಪತ್ತೆಯಾಗಿತ್ತು.

ಕಾಡಿನೊಳಗೆ ಹೋಗುವಾಗ 200 ರೂ. ಹೆಚ್ಚಿನ ಹಣ ತೆಗೆದುಕೊಂಡು ಒಳಗಡೆ ಬಿಟ್ಟಿದ್ದಾರೆ. ಮಗು ಮೇಲೆ ದಾಳಿಯಾಗಿ ಅರ್ಧ ಗಂಟೆಯಾದರೂ ಯಾವ ಅರಣ್ಯಾಧಿಕಾರಿಯೂ ಬಂದಿರಲಿಲ್ಲ. ನಂತರ ಜನ ಜಗಳ ಮಾಡಿದಾಗ ಮೃತದೇಹ ಹುಡುಕಿದ್ದಾರೆ. ನಮ್ಮ ಮಗುವಿಗೆ ಆದ ಹಾಗೆ ಯಾರಿಗೂ ಆಗಬಾರದು. ಈ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.