ಹೊತ್ತಿ ಉರಿದ ತಿರುವನಂತಪುರಂ To ದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ : ತಪ್ಪಿದ ಭಾರೀ ಅನಾಹುತ -ಕಹಳೆ ನ್ಯೂಸ್

ಜೈಪುರ್: ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ರಾಜಸ್ಥಾನದ ಕೋಟಾದ ವಿಕ್ರಮ್ಗಢ ಅಲೋಟ್ ರೈಲು ನಿಲ್ದಾಣದ ಬಳಿ ಬಿ-1 ಕೋಚ್ನಲ್ಲಿ ಮುಂಜಾನೆ 5:15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಈ ಕೋಚ್ನಲ್ಲಿ 68 ಮಂದಿ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ತಕ್ಷಣ ಬೆಂಕಿ ಹೊತ್ತಿಕೊಂಡಿದ್ದ ಬೋಗಿಯನ್ನು ಬೇರ್ಪಡಿಸಲಾಯಿತು ಮತ್ತು ಸುರಕ್ಷತೆಗಾಗಿ ಓವರ್ ಹೆಡ್ ವಿದ್ಯುತ್ ಸರಬರಾಜನ್ನು (ಒಹೆಚ್ಇ) ತಕ್ಷಣವೇ ಆಫ್ ಮಾಡಲಾಯಿತು. ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಕೋಟಾಗೆ ತೆರಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.









