ಆರ್ಸಿಬಿ ವಿರುದ್ದ ಹೀನಾಯ ಸೋಲು : ಪ್ರಶ್ನೆ ಕೇಳಿದ್ದಕ್ಕೆ ಮಾಧ್ಯಮಗಳ ವಿರುದ್ಧವೇ ಗ್ಲೆನ್ ಫಿಲಿಪ್ಸ್ ಗರಂ

ಧರ್ಮಶಾಲಾ: ಕ್ವಾಲಿಫೈಯರ್ 1 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತ ಗುಜರಾತ್ ಟೈಟಾನ್ಸ್ ಆಟಗಾರ ಗ್ಲೆನ್ ಫಿಲಿಪ್ಸ್ ಮಾಧ್ಯಮಗಳ ವಿರುದ್ಧ ಸಿಟ್ಟು ಹೊರಹಾಕಿದ ಪ್ರಸಂಗ ನಡೆದಿದೆ.
ಆಡಿದ 11 ಸದಸ್ಯರ ಬಳಗದಲ್ಲಿ ಫಿಲಿಪ್ಸ್ ಇಲ್ಲದಿದ್ದರೂ ಜಿಟಿ ಗ್ಲೇನ್ ಫಿಲಿಪ್ಸ್ ಅವರನ್ನು ಸುದ್ದಿಗೋಷ್ಠಿಗೆ ಕಳುಹಿಸಿತ್ತು. ಈ ವೇಳೆ ಪ್ರರ್ತಕರ್ತರೊಬ್ಬರು, ಆರ್ಸಿಬಿ ನೀಡಿದ್ದ 255 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟುವಾಗ ಗುಜರಾತ್ ಟೈಟಾನ್ಸ್ ತಂಡ ಮಾನಸಿಕವಾಗಿ ಮೊದಲೇ ಸೋಲನ್ನು ಒಪ್ಪಿಕೊಂಡಿತ್ತೇ ಎಂದು ಪ್ರಶ್ನಿಸಿದ್ದಾರೆ.










