Recent Posts

Sunday, September 13, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಸುಳ್ಯ

ಪ್ರವೀಣ್ ನೆಟ್ಟಾರು ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಮಧ್ಯಂತರ ಜಾಮೀನು -ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಜಾಹೀರಾತು

ಝಾಕೀರ್ ಸವಣೂರು (35) ಜಾಮೀನು ಪಡೆದವ. ಈತ ಪ್ರಕರಣದ 18ನೇ ಆರೋಪಿಯಾಗಿದ್ದ. ಪ್ರವೀಣ್ ನೆಟ್ಟಾರ್ ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾದವರಲ್ಲಿ ಈತನೂ ಒಬ್ಬನಾಗಿದ್ದ. ಈ ಪ್ರಕರಣದಲ್ಲಿ ಆರಂಭದಲ್ಲೇ ಬಂಧಿಸಲ್ಪಟ್ಟ ಇಬ್ಬರು ಪ್ರಮುಖ ಶಂಕಿತರಲ್ಲಿ ಝಾಕೀರ್ ಸವಣೂರು ಕೂಡ ಒಬ್ಬನು. ಈತನನ್ನು 2022 ಜು.28ರಂದು ಬೆಳ್ಳಾರೆಯ ಶಫೀಕ್‌ನೊಂದಿಗೆ ಪೊಲೀಸರು ವಶಕ್ಕೆ ಪಡೆದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಪ್ರಕರಣದ 26ನೇ ಆರೋಪಿಯಾಗಿರುವ ಸೋಮವಾರ ಪೇಟೆಯ ಎಚ್.ವೈ.ರಿಯಾಜ್ ಎಂಬಾತನಿಗೆ ಜಾಮೀನು ಲಭಿಸಿತ್ತು. ಈತ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ.

2022 ಜುಲೈ 26 ರಂದು ಬೆಳ್ಳಾರೆಯ ಅಕ್ಷಯ್ ಚಿಕನ್ ಸೆಂಟರ್ ಎದುರು ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಮಾರಕಾಯುಧದಿಂದ ಕೊಚ್ಚಿ ಕೊಲೆಗೈದಿದ್ದರು. ಈ ಪ್ರಕರಣವನ್ನು ಎನ್ ಐಎ ಗೆ ವಹಿಸಲಾಗಿತ್ತು. 26 ಮಂದಿಯನ್ನು ತನಿಖಾಧಿಕಾರಿಗಳು ಬಂಧಿಸಿದ್ದರು.