ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ.
ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ ಬಾಬು, MLC ಭೋಜೇಗೌಡ ಸೇರಿ 30 ಜನ ಭಕ್ತರ ತಂಡ ಶಬರಿಮಲೆಗೆ ತೆರಳಿದೆ.











