ದಾವಣಗೆರೆಯಲ್ಲಿ ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್ – ಕಹಳೆ ನ್ಯೂಸ್

ದಾವಣಗೆರೆ: ಬನ್ನಿಕೋಡು ಗ್ರಾಮದಲ್ಲಿ ಸೆರೆಯಾಗಿದ್ದ ಶಂಕಿತ ಉಗ್ರ ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಸ್ಕೆಚ್ ಹಾಕಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರನೊಬ್ಬನನ್ನು ಕೇಂದ್ರ ಗುಪ್ತಚರ ಇಲಾಖೆ ಮತ್ತು ದಾವಣಗೆರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿನ್ನೆ(ಜೂನ್ 23) ಯಶಸ್ವಿಯಾಗಿ ಬಂಧಿಸಿದ್ದರು.











