Sunday, July 26, 2026
ಸುದ್ದಿ

ರಾಮನ ಪ್ರತಿಮೆ ಜತೆಗೆ ಸೀತೆಯ ಪ್ರತಿಮೆ ಸ್ಥಾಪಿಸಿ, ಆಕೆಗೆ ಗೌರವ ಸಲ್ಲಿಸಿ: ಕರಣ್ ಸಿಂಗ್ – ಕಹಳೆ ನ್ಯೂಸ್

ಉತ್ತರ ಪ್ರದೇಶದ ಸರಯೂ ನದಿ ತೀರದಲ್ಲಿ ರಾಮನ ಬೃಹತ್ ಪ್ರತಿಮೆ ಸ್ಥಾಪನೆಗೆ ಮುಂದಾಗಿರುವ ಮುಖ್ಯಮಂತ್ರಿ ಆದಿತ್ಯನಾಥ್ ನಡೆಗೆ ಕಾಂಗ್ರೆಸ್ ಟಾಂಗ್ ನೀಡಿದೆ.

ರಾಮನ ಪ್ರತಿಮೆ ಜತೆಗೆ ಸೀತೆಯ ಪ್ರತಿಮೆಯನ್ನೂ ಸ್ಥಾಪಿಸಿ ಆಕೆಗೆ ಧೀರ್ಘಕಾಲದಿಂದ ಸಲ್ಲಸಬೇಕಿರುವ ಗೌರವ ಸಲ್ಲಿಸಿ ಎಂದು ಹಿರಿಯ ಕಾಂಗ್ರೆಸ್ಸಿಗ ಮತ್ತು ರಾಜ್ಯಸಭಾ ಸದಸ್ಯ ಕರಣ್ ಸಿಂಗ್ ಸಲಹೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನೇಪಾಳದಲ್ಲಿ ನಡೆಯುತ್ತಿರುವ ಸೀತಾರಾಮ ಕಲ್ಯಾಣೋತ್ಸವದಲ್ಲಿ ಪಾಲ್ಗೊಳ್ಳಲು ತೆರಳಿರುವ ಕರಣ್ ಸಿಂಗ್, ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಈ ಸಲಹೆ ಮಾಡಿದ್ದಾರೆ.

ಇದನ್ನು ಸಕಾರಾತ್ಮಕವಾಗಿ ಪರಿಗಣಿಸಿ ಆದಿತ್ಯನಾಥ್, ಅಯೋಧ್ಯೆಯಲ್ಲಿ ಸೀತೆಗೆ ಧೀರ್ಘಕಾಲದಿಂದ ಸಲ್ಲಬೇಕಾದ ಗೌರವ ಸಲ್ಲಿಸಲಾಗುವುದು ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.