Saturday, July 4, 2026
ಜಿಲ್ಲೆಸುದ್ದಿ

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣು -ಕಹಳೆ ನ್ಯೂಸ್

ಕೊಪ್ಪಳ: ಒಂದೇ ಕುಟುಂಬದ   ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ  ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.
ಗಂಗಾವತಿಯ ಪ್ರಶಾಂತನಗರದ ಮನೆಯಲ್ಲಿ ಪತಿ, ಪತ್ನಿ ಹಾಗೂ ಮಗ ನೇಣಿಗೆ ಶರಣಾಗಿದ್ದಾರೆ. ಮೃತರನ್ನು ಪ್ರಕಾಶ್ ರಾಯ್ಕರ್ (54), ಪ್ರಭಾ(46) ಹಾಗೂ ಶಶಾಂಕ್ (21) ಎಂದು ಗುರುತಿಸಲಾಗಿದೆ.

ಪ್ರಕಾಶ್ ರಾಯ್ಕರ್ ಜ್ಯುವೆಲ್ಲರಿ ಶಾಪ್ ನಡೆಸುತ್ತಿದ್ದರು. ಸಾಲಬಾಧೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಗಂಗಾವತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು