ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಏಕಾದಶಿಯ ಪುಣ್ಯದಿನ ಮಹಿಳೆಯರಿಂದ ಜಗದ್ಗುರು ಶ್ರೀ ಶಂಕರಾಚಾರ್ಯರರ ನಿಂದನೆ – ಕಹಳೆ ನ್ಯೂಸ್

ಉಡುಪಿ : ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಏಕಾದಶಿಯ ಪುಣ್ಯದಿನ ನಡೆದ ಕಾರ್ಯಕ್ರಮ ಒಂದರಲ್ಲಿ ಜಗದ್ಗುರು ಶಂಕರಾಚಾರ್ಯರರನ್ನು ನಿಂದನೆ ಮಾಡಿರುವ ಘಟನೆ ವರದಿಯಾಗಿದೆ.

ಏಕಾದಶಿಯಂದು ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ಇಬ್ಬರು ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಜಗದ್ಗುರು ಶಂಕರಾಚಾರ್ಯರರ ಕುರಿತು ನಿಂದನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟನೆಯನ್ನು ಶಂಕರಾಚಾರ್ಯರರ ಸಿದ್ಧಾಂತವನ್ನು ಪ್ರತಿಪಾದಿಸುವವರು ಹಾಗೂ ಹಿಂದೂ ಪರ ಹೋರಾಟಗಾರರು ಖಂಡಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಹಾಗೂ ಕ್ಷಮೆಯಾಚನೆಗೆ ಆಗ್ರಹಿಸದ್ದು, ಉಡುಪಿ ಮಠದಿಂದ ಸ್ಪಷ್ಟೀಕರಣ ನೀಡುವಂತೆ ಆಗ್ರಹಿಸಿದ್ದಾರೆ.










