
ಡೆಹ್ರಾಡೂನ್: ಬದರಿನಾಥ್ ದೇಣಿಗೆ ಕಳವು ಪ್ರಕರಣದ ಪ್ರಮುಖ ಆರೋಪಿಯನ್ನು ವಿಶೇಷ ತನಿಖಾ ತಂಡ ಡೆಹ್ರಾಡೂನ್ನಲ್ಲಿ ಬಂಧಿಸಿದೆ.
ಪ್ರಮುಖ ಆರೋಪಿ ಪ್ರಮೋದ್ ನೌಟಿಯಾಲ್ನನ್ನು ಬಂಧಿಸಲಾಗಿದ್ದು, ಈತ ಬದರಿನಾಥ್ ದೇಗುಲದಲ್ಲಿ ಕಾಣಿಕೆ ಮತ್ತು ದೇಣಿಗೆಯ ಉಸ್ತುವಾರಿ ಅಧಿಕಾರಿಯಾಗಿದ್ದನು ಎನ್ನಲಾಗಿದೆ. ಉತ್ತರಾಖಂಡ ಸರ್ಕಾರ ತನಿಖೆಗೆ ಸಮಿತಿ ರಚಿಸಿದ ಬಳಿಕ ವಿಶೇಷ ತನಿಖಾ ತಂಡವು ಆರೋಪಿಯನ್ನು ಬಂಧಿಸಿದೆ.
ಜುಲೈ 8ರಂದು ಬದರಿನಾಥ ಪೊಲೀಸ್ ಠಾಣೆಯಲ್ಲಿ ಬದರಿನಾಥ-ಕೇದಾರನಾಥ ದೇವಸ್ಥಾನದ ಸಮಿತಿ ಸದಸ್ಯರಾದ ಯುಧ್ವೀರ್ ಫರ್ಸ್ವಾನ್ ಎಂಬುವವರು ದೂರು ನೀಡಿದ್ದರು. ದೂರಿನಲ್ಲಿ ಭಕ್ತರು ನೀಡಿದ ಕಾಣಿಕೆ ಹಣವನ್ನು ಕಳ್ಳತನ ಮಾಡಿರುವುದಾಗಿ ಉಲ್ಲೇಖಿಸಿದ್ದರು. ದೂರಿನನ್ವಯ ಚಮೋಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.










