Wednesday, July 15, 2026
ಜಿಲ್ಲೆಹಾಸನ

ಭೀಮನ ಮೇಲೆ ಕಲ್ಲು ತೂರಾಟ : ಅಸ್ಸಾಂ ಮೂಲದ ಪುಂಡನ ವಿರುದ್ಧ ಸ್ಥಳೀಯರು ಗರಂ – ಕಹಳೆ ನ್ಯೂಸ್

ಹಾಸನ: ಜನರ ಅಚ್ಚುಮೆಚ್ಚಿನ ಕಾಡಾನೆ ಭೀಮನ ಮೇಲೆ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಕಲ್ಲು ತೂರಾಟ ನಡೆಸಿದ ಘಟನೆ ಸಕಲೇಶಪುರದ ಒಸ್ಸೂರು ಎಸ್ಟೇಟ್‌ನಲ್ಲಿ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಭೀಮ ಘೀಳಿಟ್ಟು ಕಾರ್ಮಿಕನತ್ತ ನುಗ್ಗಲು ಯತ್ನಿಸಿದೆ.

ಅಸ್ಸಾಂನಿಂದ ಬಂದ ಕಾರ್ಮಿಕ ನೆಲೆಸಿದ್ದ ಲೈನ್‌ ಮನೆಗಳ ಬಳಿ ಇಂದು (ಜು.14) ಬೆಳಿಗ್ಗೆ ಕಾಡಾನೆ ಭೀಮ ಸಾಗುತ್ತಿತ್ತು. ಈ ವೇಳೆ ಕಾಡಾನೆಗೆ ಕಲ್ಲುಗಳಿಂದ ಹೊಡೆದು ಹುಚ್ಚಾಟ ಪ್ರದರ್ಶಿಸಿದ್ದಾನೆ. ಪದೇ ಪದೇ ಕಲ್ಲು ತೂರಿ ಕೀಟಲೆ ಮಾಡಿದ್ದಕ್ಕೆ ಘೀಳಿಡುತ್ತಾ ತಿರುಗಿ ತಿರುಗಿ ನೋಡುತ್ತ ಭೀಮ ಓಡಿ ಹೋಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಸ್ಸಾಂ ಕಾರ್ಮಿಕನ ನಡೆಗೆ ಸ್ಥಳೀಯರು ಹಾಗೂ ಪ್ರಾಣಿ ಪ್ರಿಯರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರಿಗೂ ತೊಂದರೆ ಕೊಡದ ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲಿನಿಂದ ಹೊಡೆದು ಹಿಂಸಿಸಿರುವ ದುರುಳನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಹಾಗೂ ಪ್ರಾಣಿ ಪ್ರಿಯರು ಒತ್ತಾಯಿಸಿದ್ದಾರೆ‌.