Sunday, July 19, 2026
ಸುದ್ದಿ

ಲಿಫ್ಟ್‌ನಲ್ಲಿ ಸಿಲುಕಿದ್ದ ಸಂಸದ ಶಶಿ ತರೂರ್‌ ರಕ್ಷಣೆ -ಕಹಳೆ ನ್ಯೂಸ್

ತಿರುವನಂತಪುರಂ: ಕೇರಳದ (Kerala) ಹೋಟೆಲ್ ಒಂದರ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ (Shashi Tharoor) ಅವರನ್ನು ರಕ್ಷಿಸಲಾಗಿದೆ.

ತಿರುವನಂತಪುರಂನಲ್ಲಿ ರೋಟರಿ ಕ್ಲಬ್ ಆಫ್ ತಿರುವನಂತಪುರ ಪೂರ್ವದ ಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಕಾಂಗ್ರೆಸ್ ಸಂಸದರು ಖಾಸಗಿ ಹೋಟೆಲ್‌ನ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತರೂರ್ ಅವರನ್ನು ರಕ್ಷಿಸಿದ ನಂತರ ಅವರು ಲಿಫ್ಟ್‌ನಿಂದ ಹೊರಬರುವಾಗ ನಗುತ್ತಿರುವ ದೃಶ್ಯದ ವೀಡಿಯೋ ವೈರಲ್‌ ಆಗಿದೆ. ತರೂರ್ ಮತ್ತು ಇತರರನ್ನು ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕರು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಲಿಫ್ಟ್ ಸಿಲುಕಿಕೊಂಡಿದ್ದೆವು. ನಾವು ಹೊರಬರಲು ಎಲ್ಲಾ ರೀತಿಯಲ್ಲಿ ಪ್ರಯತ್ನಿಸಿದೆವು. ಆದರೆ, ಸಾಧ್ಯವಾಗಲಿಲ್ಲ. ನಾವು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳಿಗೆ ಕರೆ ಮಾಡಿದೆವು. ಅವರು ನಮ್ಮನ್ನು ರಕ್ಷಿಸಿದರು. ಚಿಂತಿಸಬೇಡಿ ನಾವೆಲ್ಲರೂ ಚೆನ್ನಾಗಿದ್ದೇವೆ ಎಂದು ತರೂರ್‌ ತಿಳಿಸಿದ್ದಾರೆ.

ಹೋಟೆಲ್ ಜೀವನದಲ್ಲಿ ತರೂರ್ ಸಿಲುಕಿಕೊಂಡಿರುವ ಬಗ್ಗೆ ರಕ್ಷಣಾ ಸಿಬ್ಬಂದಿಗೆ ಸಂಜೆ 7:37 ಕ್ಕೆ ಕರೆ ಬಂದಿತು. ತಕ್ಷಣ ಒಂದು ತಂಡವನ್ನು ಸ್ಥಳಕ್ಕೆ ರವಾನಿಸಲಾಯಿತು ಎಂದು ತಿರುವನಂತಪುರಂ ಅಗ್ನಿಶಾಮಕ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹೈಡ್ರಾಲಿಕ್ ಸ್ಪ್ರೆಡರ್ ಬಳಸಿ ಲಿಫ್ಟ್ ಬಾಗಿಲು ತೆರೆದು, ಲಿಫ್ಟ್ ಒಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಿದ್ದಾರೆ.