
ಮಡಿಕೇರಿ: ದೇಶದಾದ್ಯಂತ 27ನೇ ಕಾರ್ಗಿಲ್ ವಿಜಯೋತ್ಸವವನ್ನು ಭಕ್ತಿ, ಗೌರವ ಹಾಗೂ ದೇಶಭಕ್ತಿಯ ಸಂಭ್ರಮದೊಂದಿಗೆ ಆಚರಿಸಲಾಯಿತು. ಮಂಜಿನ ನಗರಿ ಮಡಿಕೇರಿಯಲ್ಲೂ ಕಾರ್ಗಿಲ್ ಯುದ್ಧದಲ್ಲಿ ಪ್ರಾಣಾರ್ಪಣೆ ಮಾಡಿದ ಅಮರ ವೀರ ಯೋಧರನ್ನ ಸ್ಮರಿಸಿ ಪುಷ್ಪನಮನ ಸಲ್ಲಿಸಲಾಯಿತು.
ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಮಡಿಕೇರಿ ನಗರದ ಯುದ್ಧ ಸ್ಮಾರಕದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು.











