
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಈ ಬೆನ್ನಲ್ಲೇ ವಿವೇಕ ಸ್ಮಾಕರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ವಿವೇಕ ಸ್ಮಾರಕ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನದ ಹಿನ್ನೆಲೆ, ಸ್ಮಾರಕ ಸುತ್ತಮುತ್ತಲಿನ ಕೆಲ ಪ್ರದೇಶಗಳಲ್ಲಿ ಸಾರ್ವಜನಿರಕ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಆ ರಸ್ತೆಗಳಲ್ಲಿ ಸಂಪೂರ್ಣ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದೆ. ಇದರೊಂದಿಗೆ ಸುತ್ತಮುತ್ತ ಪ್ರದೇಶಗಳಲ್ಲಿರುವ ಮಹಾರಾಣಿ ಶಾಲೆ, ಕಾಲೇಜು, ಮಹಾರಾಜ ಕಾಲೇಜು, ಮರಿಮಲ್ಲಪ್ಪ ಶಾಲೆ, ಕಾಲೇಜು, ಸದ್ವಿದ್ಯ ಶಾಲೆ, ರೋಟರಿ ವಿದ್ಯಾಸಂಸ್ಥೆಗೆ ರಜೆ ಘೋಷಣೆ ಮಾಡಲಾಗಿದೆ.











