
ಮಡಿಕೇರಿ: ತಾಲೂಕಿನ ಚೇಲಾವರದಲ್ಲಿ ಭಾರೀ ಮಳೆಯಿಂದಾಗಿ ಪೊನ್ನೋಲ ಸಾಸ್ಥಾವು ದೇವಾಲಯದ ಮುಂಭಾಗ ಭೂಕುಸಿತ ಸಂಭವಿಸಿದೆ.
ಭೂಕುಸಿತದಿಂದ ದೇವಾಲಯಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾನಿಯಾಗಿದೆ. ಮೆಟ್ಟಿಲುಗಳು ಕುಸಿದು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ದೇವಾಲಯಕ್ಕೆ ಬರುವ ಭಕ್ತರು ಎಚ್ಚರಿಕೆಯಿಂದ ಬರುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆ ಮತ್ತು ಮೆಟ್ಟಿಲು ಹಾನಿಯಿಂದ ಅಪಾರ ನಷ್ಟವಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










