ಕೆಂಪು ಸಮುದ್ರದಲ್ಲಿ ಫಸ್ಟ್ ಟೈಮ್ ಭಾರತೀಯ ಹಡಗಿನ ಮೇಲೆ ದಾಳಿ : ಎಲ್ಲಾ 14 ಸಿಬ್ಬಂದಿ ರಕ್ಷಣೆ, ಭಾರತ ಖಂಡನೆ – ಕಹಳೆ ನ್ಯೂಸ್

ನವದೆಹಲಿ: ಯೆಮನ್ನ ಪಶ್ಚಿಮ ಕರಾವಳಿ ಸಮೀಪದ ಕೆಂಪು ಸಮುದ್ರದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಹಡಗಿನ ಮೇಲೆ ದಾಳಿಯಾಗಿದೆ. ಸ್ಫೋಟಕಗಳಿಂದ ತುಂಬಿದ ದೋಣಿಯೊಂದು ಭಾರತೀಯ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಹಡಗು ಮುಳುಗಿರುವ ಘಟನೆ ನಡೆದಿದೆ.
ಈ ದಾಳಿಯಲ್ಲಿ ಹಡಗಿನಲ್ಲಿದ್ದ 13 ಭಾರತೀಯರು ಸೇರಿದಂತೆ ಒಟ್ಟು 14 ಸಿಬ್ಬಂದಿಯನ್ನ ಯೆಮನ್ ನೌಕಾಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದೆ. ಈ ದಾಳಿಯ ಹೊಣೆಯನ್ನ ಇದುವರೆಗೆ ಯಾವುದೇ ಸಂಘಟನೆ ಹೊತ್ತಿಲ್ಲ. ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ನಡೆದ ಮೊದಲ ದಾಳಿ ಇದಾಗಿದೆ ಎಂದು ವರದಿಯಾಗಿದೆ.
ಭಾರತದಿಂದ ತೀವ್ರ ಖಂಡನೆ
ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಈ ಬಗ್ಗೆ ಪ್ರತಿಕ್ರಿಯಿಸಿ, ಭಾರತೀಯ ಹಡಗಿನ ಮೇಲಿನ ದಾಳಿಯನ್ನ ಅಪ್ರಚೋದಿತ ಮತ್ತು ಅಮಾನವೀಯ ದಾಳಿ ಎಂದು ಕರೆದಿದ್ದರೆ.











