
ಪುತ್ತೂರು : ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಚಿವ ಸಿಟಿ ರವಿ ಭೇಟಿ ನೀಡಿದ್ದಾರೆ.
ತಿರಂಗ ಯಾತ್ರೆ ಸಮಿತಿ, ವಿಧಾನಸಭಾ ಕ್ಷೇತ್ರ ಪುತ್ತೂರು ವತಿಯಿಂದ ಇಂದು ಪುತ್ತೂರಿನಲ್ಲಿ ನಡೆಯಲಿರುವ ಬೃಹತ್ ತಿರಂಗ ಯಾತ್ರೆ ಹಿನ್ನಲೆ ಪುತ್ತೂರಿಗೆ ಬಂದಿರುವ ಸಚಿವರು ಮೊದಲಿಗೆ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.











