ಪತ್ನಿಗೆ ರೀಲ್ಸ್ ಹುಚ್ಚು, ಊಟ ಹಾಕದಿದ್ದಕ್ಕೆ ಕೊಲೆ; ಶವ ಬೆಡ್ಶೀಟ್ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಪತಿ ಲಾಕ್ – ಕಹಳೆ ನ್ಯೂಸ್

ಬೆಂಗಳೂರು: ಕುಂಬಳಗೋಡು ಬಳಿ ಪತ್ನಿಯನ್ನು ಕೊಲೆ ಮಾಡಿ, ಶವವನ್ನು ಬೆಡ್ಶೀಟ್ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದಲ್ಲಿ ಸಿಕ್ಕಿಬಿದ್ದ ಧೀರಜ್ ಕುಮಾರ್ (24), ವಿಚಾರಣೆ ವೇಳೆ ಕೊಲೆಗೆ ಕಾರಣ ಏನು ಎಂಬುದನ್ನು ಬಿಚ್ಚಿಟ್ಟಿದ್ದಾನೆ.
ಕುಂಬಳಗೋಡು ಗೇರುಪಾಳ್ಯದಲ್ಲಿ ಜುಲೈ 27ರಂದು ಪತ್ನಿ ರೀಮಾ ಕುಮಾರಿಯನ್ನು ಕೊಲೆ ಮಾಡಿದ್ದ ಧೀರಜ್ ಬಳಿಕ ಬಿಹಾರಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಕೆಲವು ದಿನಗಳ ನಂತರ ರೀಮಾ ಸ್ನೇಹಿತೆ ಆಕೆಗೆ ಕರೆ ಮಾಡಿದರೂ ಫೋನ್ ರಿಸೀವ್ ಆಗಿರಲಿಲ್ಲ. ಹೀಗಾಗಿ ಮನೆಗೆ ಹೋಗಿ ನೋಡಿದಾಗ ಮನೆಯಿಂದ ದುರ್ವಾಸನೆ ಬರುತ್ತಿರುವುದು ಗೊತ್ತಾಗಿದೆ. ಒಳಗೆ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ರೀಮಾ ಕುಮಾರಿ ಶವ ಪತ್ತೆಯಾಗಿತ್ತು.











