Thursday, August 13, 2026
ಸುದ್ದಿ

ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ : ಎಂದಿನಂತೆ ಬಸ್‌ ಸಂಚಾರ- ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್  ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಾಹೀರಾತು

ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದಿರುವುದರಿಂದ ನಗರದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಜನಜೀವನ ಎಂದಿನಂತೆ ಸಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು  ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕನ್ನಡಪರ ಸಂಘಟನೆಯ ಅಧ್ಯಕ್ಷ ಗಿರೀಶ್ ಗೌಡ ಅವರನ್ನು ಇಂದು ಬೆಳಗಿನ ಜಾವ 5:30ಕ್ಕೆ ಕೆ.ಹೆಚ್.ಬಿ. ನಗರದಲ್ಲಿರುವ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಗಿ ಬಂದೋಬಸ್ತ್‌:
ಸಾರ್ವಜನಿಕರಿಗೆ ಹಾಗೂ ಆಸ್ತಿಗೆ ಯಾವುದೇ ಹಾನಿಯಾಗದಂತೆ ತಡೆಯಲು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ. ತಮಿಳು ಭಾಷಿಕರು ಹೆಚ್ಚಾಗಿ ವಾಸಿಸುವ ಪ್ರದೇಶಗಳು ಹಾಗೂ ಗಡಿ ಭಾಗಗಳಲ್ಲಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.