
ಬಳ್ಳಾರಿ: ಬೈಕಿಗೆ ಕಾರು ಡಿಕ್ಕಿಯಿಂದಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಓಬಳಾಪುರ ಗ್ರಾಮದ ಉಮೇಶ್ (54) ಮೃತ ಬೈಕ್ ಸವಾರ. ರಾಷ್ಟ್ರೀಯ ಹೆದ್ದಾರಿ ಕ್ರಾಸ್ ಮಾಡುವಾಗ ವೇಗವಾಗಿ ಬಂದು ಕಾರು ಬೈಕ್ ಗೆ ಡಿಕ್ಕಿಯಾಗಿದೆ.
ಕಾರು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರು ಚಾಲಕನ ವಿರುದ್ಧ ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











