
ಕಾರವಾರ: ಬೇರೆ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 9 ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಿಂದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಸಾಗಿಸುತ್ತಿದ್ದ ವೇಳೆ ಶಿರಸಿಯಲ್ಲಿ ತಹಸಿಲ್ದಾರ್, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಹತ್ತು ವ್ಹೀಲ್ ಲಾರಿಯಲ್ಲಿ ಇದ್ದ 476 ಚೀಲ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
ಶಿರಸಿ ತಹಸಿಲ್ದಾರ್ ಪಟ್ಟರಾಜ ಗೌಡ, ನಗರ ಠಾಣೆ ಪಿಎಸ್ಐ ನರಸಿಂಹಲು ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸಿದ್ದಾಪುರದಿಂದ ಕೊಲ್ಲಾಪುರ ಕಡೆಗೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದು ದಿಢೀರ್ ದಾಳಿ ನಡೆಸಿ ನೀಲೇಕಣಿ ಭೀಮನಗುಡ್ಡ ಕ್ರಾಸ್ ಬಳಿ ಲಾರಿ ಅಡ್ಡಗಟ್ಟಿದ ಅಧಿಕಾರಿಗಳು ಲಾರಿ ಚಾಲಕನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.











