Tuesday, September 8, 2026
ಸುದ್ದಿ

ಯಶವಂತಪುರ ಎಪಿಎಂಸಿಯಲ್ಲಿ ಪೆಟ್ಟಿಗೆ ಅಂಗಡಿಯಲ್ಲಿ ಕೂಲಿಕಾರರೊಂದಿಗೆ ಇಡ್ಲಿ ತಿಂದ ಡಿಕೆಶಿ- ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್   ಅವರು ಮಂಗಳವಾರ ಮುಂಜಾನೆ 7 ಗಂಟೆಗೆ ಯಶವಂತಪುರದ ಎಪಿಎಂಸಿ  ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈರುಳ್ಳಿ ಮಂಡಿಗೆ ಭೇಟಿ ನೀಡಿದ ಅವರು, ಸ್ಥಳೀಯ ವರ್ತಕರು, ರೈತರು ಮತ್ತು ಕೂಲಿಕಾರರೊಂದಿಗೆ ಕುಳಿತು ಸಮಸ್ಯೆಗಳನ್ನು ಆಲಿಸಿದರು.

ಜಾಹೀರಾತು

ಮಾರುಕಟ್ಟೆ ಪರಿಶೀಲನೆ ವೇಳೆ ರಸ್ತೆ ಬದಿಯ ಸಣ್ಣ ಪೆಟ್ಟಿಗೆ ಹೋಟೆಲ್‌ಗೆ ತೆರಳಿದ ಡಿ.ಕೆ. ಶಿವಕುಮಾರ್, ಅಲ್ಲಿನ ಕೂಲಿ ಕಾರ್ಮಿಕರ ಜೊತೆಯಲ್ಲೇ ಕುಳಿತು ಇಡ್ಲಿ  ಸೇವಿಸಿದರು. ಈ ವೇಳೆ ತಮ್ಮೊಂದಿಗೆ ಕುಳಿತಿದ್ದ ಕೂಲಿಕಾರರ ಉಪಹಾರದ ಬಿಲ್ ಪಾವತಿಸಲು ಮುಂದಾಗಿ ಹೋಟೆಲ್  ಮಾಲೀಕರಿಗೆ 500 ರೂ. ನೀಡಿ ಇವರ ಬಳಿ ಹಣ ಪಡೆಯಬೇಡಿ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಭೇಟಿಯ ವೇಳೆ ಎಪಿಎಂಸಿ ಮಾಜಿ ಸದಸ್ಯ ಅರುಣ್ ಪರಮೇಶ್ವರ್ ಹಾಗೂ ಸ್ಥಳೀಯರು ಮಾರುಕಟ್ಟೆಯ ದುರವಸ್ಥೆ ಮತ್ತು ಅವ್ಯವಸ್ಥೆಗಳ ಕುರಿತು ದೂರು ನೀಡಿದರು.

ರೈತರಿಗೆ ಕುಡಿಯುವ ನೀರಿನ ಸೌಲಭ್ಯವಿಲ್ಲದೆ ಬಾಟಲಿಗೆ 20 ರೂ. ನೀಡಿ ಖರೀದಿಸಬೇಕಾದ ಸ್ಥಿತಿಯಿದೆ. ಶೌಚಾಲಯದ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ರೈತರಿಗಾಗಿ ನಿರ್ಮಿಸಲಾದ ಈ ಮಾರುಕಟ್ಟೆಯಲ್ಲಿ ಹಿಂದಿನ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿ ಲೂಟಿ ಹೊಡೆದಿದ್ದಾರೆ ಎಂದು ಆರೋಪಿಸಿ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದರು.

ಮಂಡಿ ವ್ಯಾಪಾರಿಗಳು ಹಾಗೂ ರೈತರೊಂದಿಗೆ ನಡೆಸಿದ ಮಾತುಕತೆಯ ವೇಳೆ ರೈತರು ತಮ್ಮ ಅಳಲು ತೋಡಿಕೊಂಡರು. ಸ್ಥಳದಲ್ಲಿ ಅಧಿಕಾರಿಗಳ ನಿಯಂತ್ರಣವಿಲ್ಲದೆ, ವ್ಯಾಪಾರಿಗಳು ಒಂದೊಂದು ರೀತಿಯ ದರ ನಿಗದಿಪಡಿಸುತ್ತಿದ್ದಾರೆ. ಚಿತ್ರದುರ್ಗ ಸೇರಿದಂತೆ ಹೊರ ಜಿಲ್ಲೆಗಳಲ್ಲಿ ಮಾರುಕಟ್ಟೆ ಸಮಸ್ಯೆ ಇರುವುದರಿಂದ ಯಶವಂತಪುರಕ್ಕೆ ಬರುತ್ತಿದ್ದು, ಇಲ್ಲಿ ಮಧ್ಯವರ್ತಿಗಳ ಹಾವಳಿ ವಿಪರೀತವಾಗಿದೆ. ತೂಕದಲ್ಲೂ ಭಾರೀ ಮೋಸ ನಡೆಯುತ್ತಿದ್ದು, 65 ಕೆಜಿ ತೂಕದ ಮೂಟೆಯನ್ನು ಕೇವಲ 50 ಕೆಜಿ ಎಂದು ಲೆಕ್ಕ ಹಾಕಲಾಗುತ್ತಿದೆ ಎಂದು ರೈತರು ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದರು.