Recent Posts

Saturday, September 12, 2026
ರಾಜ್ಯಸುದ್ದಿ

ಒಂದೇ ವೇಲ್‌ನಲ್ಲಿ ನೇಣಿಗೆ ಕೊರಳೊಡ್ಡಿದ ಆಂಟಿ & ಯುವಕ : ಲವ್‌ಗೆ ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಶಂಕೆ – ಕಹಳೆ ನ್ಯೂಸ್

ಕಲಬುರಗಿ: ನೇಣು ಬಿಗಿದುಕೊಂಡು ಯುವಕ ಹಾಗೂ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ತಾಪುರ  ತಾಲೂಕಿನ ಸಂಕನೂರು ಗ್ರಾಮದ ಹೊರವಲಯದಲ್ಲಿರುವ ಗುಡ್ಡದಲ್ಲಿ ನಡೆದಿದೆ.
ಚಿತ್ತಾಪುರ ಪಟ್ಟಣದ ಶರಣಮ್ಮ (32) ಹಾಗೂ ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಬಸವರಾಜ್ (21) ಆತ್ಮಹತ್ಯೆ ಶರಣಾದ ದುರ್ದೈವಿಗಳು. ಇವರಿಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಗೆ (Love) ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಜಾಹೀರಾತು

ಕಳೆದ ಎರಡು ಮೂರು ದಿನದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು