Sunday, September 20, 2026
ಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 78 : “ಸಮಾನತೆಯ ಸಮಾಜದ ಕನಸು ಕಂಡವರು ನಾರಾಯಣಗುರುಗಳು” : ಅರ್ಚನಾ ಎಂ. ಬಂಗೇರ- ಕಹಳೆ ನ್ಯೂಸ್

ಬಂಟ್ವಾಳ : ಅಸಮಾನತೆ, ಅಜ್ಞಾನ, ಮೂಢನಂಬಿಕೆ ಹಾಗೂ ಸಾಮಾಜಿಕ ಅನ್ಯಾಯಗಳಿಂದ ಮನುಷ್ಯನಿಗೆ ಮುಕ್ತಿ ದೊರೆಯುವುದೇ ನಿಜವಾದ ಸ್ವಾತಂತ್ರ್ಯ ಎಂಬ ವಿಶಾಲ ಚಿಂತನೆಗೆ ಶ್ರೀ ನಾರಾಯಣಗುರುಗಳು ತಮ್ಮ ಜೀವನದ ಮೂಲಕ ದಾರಿ ತೋರಿಸಿದರು ಎಂದು ಬರಹಗಾರ್ತಿ ಅರ್ಚನಾ ಎಂ. ಬಂಗೇರ ಹೇಳಿದರು.

ಜಾಹೀರಾತು

ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ, ಮನೋಜ್ ಕಟ್ಟೆಮಾರ್ ಅವರ ಸಾನಿಧ್ಯದಲ್ಲಿ ಸೆ.18 ಶುಕ್ರವಾರ ನಡೆದ ‘ಗುರುತತ್ವವಾಹಿನಿ’ ಮಾಲಿಕೆ–78ರಲ್ಲಿ ಗುರುಸಂದೇಶ ನೀಡಿದ ಅವರು, ನಾರಾಯಣಗುರುಗಳ ಚಿಂತನೆಗಳು ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶಿಕ್ಷಣದಿಂದ ಜ್ಞಾನ, ಸಂಘಟನೆಯಿಂದ ಶಕ್ತಿ ಹಾಗೂ ಆತ್ಮಗೌರವದಿಂದ ಸ್ವಾತಂತ್ರ್ಯ — ಈ ಮೂರು ಮಾರ್ಗಗಳ ಮೂಲಕ ಸಮಾಜವನ್ನು ಮುನ್ನಡೆಸುವ ನಾರಾಯಣಗುರುಗಳ ಸಂದೇಶವು ಇಂದಿನ ಯುವಜನತೆಗೆ ವಿಶೇಷವಾಗಿ ದಾರಿದೀಪವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕಲ್ಲಡ್ಕ ಬಿಲ್ಲವ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯಾನ್, ಕೋಶಾಧಿಕಾರಿ ಕಿಶೋರ್ ಕಟ್ಟೆಮಾರ್, ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಕಾರ್ಯದರ್ಶಿ ಗೀತಾ ಜಗದೀಶ್, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ನವೀನ್ ಕಾರಜೆ, ನವೀನ್ ಕುಡ್ಮೆರ್, ಸುನೀತಾ ಮಾರ್ನಬೈಲ್, ಸದಸ್ಯರಾದ ಯತೀಶ್ ಬೊಳ್ಳಯಿ, ಜಗನಾಥ ಕಲ್ಲಡ್ಕ, ಯಶೋಧರ್ ಕಡಂಬಳಿಕೆ, ಮಧುಸೂದನ್ ಮದ್ವ, ಪ್ರಶಾಂತ್ ಕೊಟ್ಟಾರಿ ಪಾಲು ಮಾಜಿ ಅಧ್ಯಕ್ಷರಾದ ರಾಜೇಶ್ ಸುವರ್ಣ, ಪ್ರೇಮಾನಾಥ ಕರ್ಕೇರ, ಶಿವಾನಂದ ಎಂ, ಅರುಣ್ ಮಹಾಕಾಳಿಬೆಟ್ಟು, ಮತ್ತು ಹರೇಕೃಷ್ಣ ಭಕ್ತವೃಂದ ಸದಸ್ಯರು ಉಪಸ್ಥಿತರಿದ್ದರು. ಭಜನಾ ಸಂಕೀರ್ತನೆ ಯಲ್ಲಿ ಕಾರ್ತಿಕ್ ದೇರಾಜೆ, ಸಾತ್ವಿಕ್ ದೇರಾಜೆ ಸಹಕರಿಸಿದರು ಆತಿಥ್ಯ ವಹಿಸಿದ್ದ ಮನೋಜ್ ಕಟ್ಟೆಮಾರ್ ಆಗಮಿಸಿದ ಸರ್ವರಿಗೂ ಕ್ರತಜ್ಞತೆ ಸಲ್ಲಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಪೂಜಾರಿ ಬೊಳ್ಳಾಯಿ ಧನ್ಯವಾದ ನೀಡಿದರು. ಅಧ್ಯಕ್ಷರಾದ ಕಿರಣ್ ರಾಜ್ ಪೂಂಜರಕೊಡಿ ಕಾರ್ಯಕ್ರಮ ನಿರೂಪಿಸಿದರು.