Sunday, July 26, 2026
ಸುದ್ದಿ

ಮಂಡ್ಯದಲ್ಲಿ ಇಂದು ಅಂಬಿಗಾಗಿ ನುಡಿ ನಮನ ಕಾರ್ಯಕ್ರಮ – ಕಹಳೆ ನ್ಯೂಸ್

ದಿವಂಗತ ನಟ, ಮಾಜಿ ಸಚಿವ ಅಂಬರೀಶ್ ಅವರ ಹುಟ್ಟೂರು ಮಂಡ್ಯದಲ್ಲಿ ಇಂದು ಅಂಬಿಗಾಗಿ ನುಡಿ ನಮನ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂಬರೀಶ್ ಅಭಿಮಾನಿ ಬಳಗದಿಂದ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಂಬರೀಶ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್‌ಗೌಡ, ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ನಡುವೆ ಸಂಗೀತ ಸಂಜೆ ಕೂಡಾ ಆಯೋಜಿಸಲಾಗಿದೆ.