
ಮಂಗಳೂರು: ಕಾರಿಗೆ ನಕಲಿ ಸಂಖ್ಯಾ ಫಲಕ ಅಳವಡಿಸಿ ದರೋಡೆಗೆ ಸಂಚು ರೂಪಿಸಿದ್ದ ಐವರು ಅಂತಾರಾಜ್ಯ ಕಳ್ಳರನ್ನು ಉಳ್ಳಾಲ ಠಾಣಾ ಪೊಲೀಸರು ಹಾಗೂ ರೌಡಿ ನಿಗ್ರಹ ದಳದ ಸಿಬ್ಬಂದಿ ಬಂಧಿಸಿದ್ದಾರೆ.

ಕೇರಳದ ತ್ರಿಶ್ಶೂರ್ನ ಮೊಹಮ್ಮದ್ ಫಾಝಿಲ್, ಮೊಹಮ್ಮದ್ ಶರೀಫ್, ಅನಾಸ್, ಸಲೀಂ ಹಾಗೂ ಜಿ. ಸುಜಿತ್ ಬಂಧಿತ ಆರೋಪಿಗಳು.
ಬಂಧಿತರು ಠಾಣಾ ವ್ಯಾಪ್ತಿಯ ತಲಪಾಡಿಯಲ್ಲಿ ವ್ಯಾಗನಾರ್ ಕಾರಿನ ನಂಬರ್ ಪ್ಲೇಟ್ ಬದಲಾಯಿಸಿದ್ದು, ಮಾರಕಾಸ್ತ್ರಗಳನ್ನು ಇರಿಸಿಕೊಂಡು ದರೋಡೆ ನಡೆಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.









