Monday, April 27, 2026
ಸುದ್ದಿ

ಉಡುಪಿಯ ಮರಳು ಸಮಸ್ಯೆ ಪರಿಹಾರಕ್ಕೆ ಚುನಾವಣೆ ಅಡ್ಡಿ – ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲೆಯಲ್ಲಿನ ಮರಳು ಸಮಸ್ಯೆ ಪರಿಹಾರಕ್ಕೆ ಇದೀಗ ಚುನಾವಣೆ ಅಡ್ಡಿಯಾಗಿದೆ. ಮಂಗಳವಾರ ಮರಳಿಗಾಗಿ ಹೋರಾಟ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಏಳು ಸದಸ್ಯರ ಸಮಿತಿಯ ಸಭೆ ನಡೆಯದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. “ಚುನಾವಣೆ ಘೋಷಣೆಯಾಗಿರುವುದರಿಂದ ಚುನಾವಣಾಧಿಕಾರಿಗಳ ಬಳಿ ಚರ್ಚಿಸಿ ಅನಂತರ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ಜಿಲ್ಲಾಧಿಕಾರಿಯವರು ಪ್ರತಿಕ್ರಿಯಿಸಿದ್ದಾರೆ ಎಂದು ಹೋರಾಟ ಸಮಿತಿಯವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು