
ಆಂಧ್ರಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಸಿ.ಆರ್.ಪಿ.ಎಫ್. ಯೋಧರೊಬ್ಬರು ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪಡೆಯಾಲ ಸಮೀಪದಲ್ಲಿ ಬೆಳಗಿನಜಾವ ಸಿ.ಆರ್.ಪಿ.ಎಫ್. ಯೋಧರು ಮತ್ತು ಆಂಧ್ರಪ್ರದೇಶ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.
ಕಾರ್ಯಾಚರಣೆಯಲ್ಲಿ ಗಾಯಗೊಂಡಿರುವ ಸಿ.ಆರ್.ಪಿ.ಎಫ್. ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.









