Monday, April 27, 2026
ಸುದ್ದಿ

ಆಗುಂಬೆ ಘಾಟ್‍ನಲ್ಲಿ ಸಂಚಾರ ನಿಷೇಧ – ಕಹಳೆ ನ್ಯೂಸ್

ಮಳೆ ಆರಂಭವಾದ ಹಿನ್ನಲೆಯಲ್ಲಿ ಆಗುಂಬೆ ಘಾಟ್‍ನಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕಾರ್ಯ ಕೈಗೊಂಡಿದೆ, ಈ ಹಿನ್ನೆಲೆಯಲ್ಲಿ ಮಾರ್ಚ್ 1ರಿಂದ 31ರವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದೆ.ಸಂಚಾರ ನಿಷೇಧ ಮೇ 1 ರಿಂದ 15 ರವರೆಗೆ ಅಥವಾ ಕಾಮಗಾರಿ ಮುಗಿಯುವ ತನಕ ಜಾರಿಯಲ್ಲಿರುವುದು. ಕಾಮಗಾರಿ ನಡೆಯುವ ವೇಳೆ ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಈ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ. ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಎಲ್ ಸಿವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು. ಭಾರಿ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ ಲಕ್ಷುರಿ ಬಸ್‍ಗಳು, ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀಸ್ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ- ಹೊಸಂಗಡಿ-ಸಿದ್ದಾಪುರ- ಕುಂದಾಪುರ-ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬದಲಿ ಮಾರ್ಗದೊಂದಿಗೆ ಆಗುಂಬೆಯಲ್ಲಿರುವ ಸರ್ಕಾರಿ ಶಾಲೆ ಮತ್ತು ಎಸ್ ವಿ ಎಸ್ ಶಾಲೆಗಳಿಗೆ ವಿದ್ಯಾರ್ಥಿಗಳು ಓಡಾಡಬೇಕಾದ ಅವಶ್ಯಕತೆ ಇರುವುದರಿಂದ ಮಿನಿ ಬಸ್‍ಗಳನ್ನು ತೀರ್ಥಹಳ್ಳಿ-ಆಗುಂಬೆ- ಬಿದರಗೋಡು-ಶೃಂಗೇರಿ ಮಾರ್ಗವಾಗಿಯೂ ಮತ್ತು ಸಾಮಾನ್ಯ ಬಸ್‍ಗಳನ್ನು ತೀರ್ಥಹಳ್ಳಿ-ಕಲ್ಮನೆ-ಹೆಗ್ಗೋಡು- ರಾಮಕೃಷ್ಣಾಪುರ- ಕಮ್ಮರಡಿ-ಶೃಂಗೇರಿ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ತಿಳಿಸಲಾಗಿದೆ.