Thursday, March 12, 2026
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಧಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹದ ಸಂಭ್ರಮ – ಕಹಳೆ ನ್ಯೂಸ್

ದೇವರ ಸನ್ನಿದಿಯಲ್ಲಿ ಹೂವಿನ ಅಲಂಕಾರ. ಶೃಂಗಾರಗೊಂಡ ಆನೆಗಳು, ಕೊಂಬು, ಕಹಳೆ, ಕಲಶಗಳೊಂದಿಗೆ ದಂಪತಿಗಳ ಸಪ್ತಪಥಿ, ಏಳೇಳು ಜನ್ಮದಲ್ಲಿ ಸತಿ ಪತಿಯರಾಗಿ ಬದುಕನ್ನ ನಡೆಸೋ ಕನಸು ಕಂಡಿರೋ ಮುದ್ದು ಜೋಡಿಗಳು , ಹೌದು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮದುವೆಯ ಸಂಭ್ರಮ ಮನೆ ಮಾಡಿತ್ತು. ಬುಧವಾರ ಸಂಜೆ 6.48ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

102 ಜೋಡಿ ವಧು-ವರರು, ಅವರ ಮನೆಯವರು ಸಂಭ್ರಮದಿಂದ ಉಚಿತ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡರು. ದೇವಳದ ಆವರಣದಿಂದ ವಧು-ವರರನ್ನು ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಕರೆತರಲಾಯಿತು. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವಧು-ವರರು ದೇವಸ್ಥಾನಕ್ಕೆ ಒಂದು ಸುತ್ತು ಬಂದು ಅಲ್ಲಿಂದ ಮೆರವಣಿಗೆಯ ಮೂಲಕ ಸಭಾಭವನದತ್ತ ಹೆಜ್ಜೆ ಹಾಕಿದರು.

ಜಾಹೀರಾತು
ಜಾಹೀರಾತು

ವೈದಿಕರ ಮಂಗಳ ವೇದಘೋಷ, ವಾದ್ಯಘೋಷಗಳ ನಡುವೆ . ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 102 ಜೋಡಿ ವಧು-ವರರು ನೂತನ ದಂಪತಿಗಳಾಗಿ ಗ್ರಹಸ್ಥಾಶ್ರಮಕ್ಕೆ ಕಾಲಿಟ್ಟರು. ಭಾನುವಾರ ಸಂಜೆ 6.48ರ ಗೋಧೂಳಿ ಸುಮುಹೂರ್ತದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಖ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ ಮಂಜುನಾಥಸ್ವಾಮಿಯ ಅನುಗ್ರಹದೊಂದಿಗೆ ಪ್ರಮಾಣ ವಚನ ಸ್ವೀಕರಿಸಿ ಸತಿಪತಿಗಳಾದರು.

ಶ್ರೀ ಕ್ಷೇತ್ರದಲ್ಲಿ ಇಂದು ಮಂಗಲ ಮುಹೂರ್ತದಲ್ಲಿ ವಧೂ-ವರರಾಗಿ ಪವಿತ್ರ ಬಾಂಧವ್ಯ ಹೊಂದಿರುವ ನಾವು ಮುಂದೆ ಜೀವನದುದ್ದಕ್ಕೂ ಧರ್ಮ, ಅರ್ಥ, ಕಾಮಗಳಲ್ಲಿ ಸಹಚರರಾಗಿ ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ ಹಾಗೂ ಯಾವುದೇ ದುರಾಭ್ಯಾಸಗಳಿಗೆ ತುತ್ತಾಗದೆ ಬದುಕುತ್ತೇವೆ ಎಂಬುದಾಗಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಡಾ. ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಸ್ವೀಕರಿಸಿದರು.