Friday, March 13, 2026
ಸುದ್ದಿ

ಕಣ್ಮರೆಯಾದ ಸುವರ್ಣ ತ್ರಿಭುಜ ಬೋಟ್ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ – ಕಹಳೆ ನ್ಯೂಸ್

ಉಡುಪಿ : ಉಡುಪಿಯ ಸುವರ್ಣ ತ್ರಿಭುಜ ಬೋಟ್‍ನಲ್ಲಿ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿದ್ದ 7 ಜನ ಮೀನುಗಾರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ದೊಡ್ಡ ಮೊತ್ತದ ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದರು.

ಇವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮೀನುಗಾರ ಸಂಕಷ್ಟ ಪರಿಹಾರ ನಿಧಿ, ಸಿಎಂ ಪರಿಹಾರ ನಿಧಿಯಿಂದ ಹಣ ನೀಡಲಾಗುವುದು. ಸಮುದ್ರದಲ್ಲಿ ಕಣ್ಮರೆಯಾದವರು ಶೀಘ್ರ ಪತ್ತೆಯಾಗಲಿ ಎಂಬುದು ನಮ್ಮ ಆಶಯ ಎಂದು ಹೇಳಿದರು.
ನಾಲ್ಕೂವರೆ ತಿಂಗಳ ಹಿಂದೆ ಉಡುಪಿಯ ಮಲ್ಪೆ ಬಂದರ್‌ನಿಂದ ಮೀನುಗಾರಿಕೆ ತೆರಳಿದ್ದ ಸುವರ್ಣ ತ್ರಿಭುಜ ಎಂಬ ಬೋಟಿನ ಅವಶೇಷಗಳು ಮಹಾರಾಷ್ಟ್ರದ ಮಾಲ್ವಾನ್ ಬಳಿ ಸಮುದ್ರದಲ್ಲಿ ಇತ್ತೀಚಿಗೆ ಪತ್ತೆಯಾಗಿದ್ದವು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಮುದ್ರದ ಸುಮಾರು 60-70 ಮೀಟರ್ ಆಳದಲ್ಲಿ ಬೋಟಿನ ಅವಶೇಷಗಳನ್ನು ನೌಕಪಡೆಯ ಹೆಲಿಕಾಪ್ಟರ್‌ಗಳು, ಹಡಗುಗಳು ನಿರಂತರ ಶೋಧ ನಡೆಸಿ ಪತ್ತೆ ಹಚ್ಚಿವೆ ಎಂದು ನೌಕಾಪಡೆ ತಿಳಿಸಿದೆ.

ಜಾಹೀರಾತು
ಜಾಹೀರಾತು